ಉಜಿರೆ : ಸತತ ಪ್ರಯತ್ನವೇ ಯಶಸ್ಸಿನ ಗುಟ್ಟು ಎಂದು ಉಜಿರೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಬಿ ಸೋಮಶೇಖರ ಶೆಟ್ಟಿ ಇವರು ಹೇಳಿದರು . ಅವರು ಸೆ.2 ರಂದು ಉಜಿರೆ ಶ್ರೀಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ವಹಿಸಿದ್ದರು ಅತಿಥಿಗಳಾಗಿ ಶ್ರೀ ಧ.ಮಂ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಸದಾಶಿವ ಪೂಜಾರಿ, ಉಜಿರೆ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ವೆಂಕಟೇಶ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ಪದಾಧಿಕಾರಿ ಶ್ರೀಮತಿ ಜ್ಯೋತಿ ಸಿ. ಎನ್, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಜಯ ಜಿ ಅರಳಿ ಇವರುಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಿದರು. ಶ್ರೀಮತಿ ರೇವತಿ ಇವರು ಸ್ವಾಗತಿಸಿದರು, ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು, ಪವನ್ ಕುಮಾರ್ ಧನ್ಯವಾದವಿತ್ತರು.