ಕುಕ್ಕೇಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28 ರಂದು ರಾಜ್ಯಾದ್ಯಂತ ಐತಿಹಾಸಿಕ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲು ಸರ್ಕಾರವು ತೀರ್ಮಾನಿಸಿದಂತೆ ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಅಧ್ಯಕ್ಷರಾದ ಜನಾರ್ಧನ ಪೂಜಾರಿ,ಗ್ರಾಮ ಪಂಚಾಯತಿನ ಎಲ್ಲಾ ಜನಪ್ರತಿನಿಧಿಗಳು, ಪಿಡಿಒ ನವೀನ್ ಹಾಗೂ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದರು.