![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು, ಲಕ್ಷ್ಮೀ ಗ್ರೂಪ್ ಮಾಲಕ ಮೋಹನ್ ಕುಮಾರ್ ಮತ್ತು ಸಂದ್ಯಾ ಟ್ರೇಡರ್ಸ್ ನ ಮಾಲಕ ರಾಜೇಶ್ ಪೈ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಸ್ವೀಕರಿಸಿ ವಾಪಸಾದ ಸಂದರ್ಭದಲ್ಲಿ ಉಜಿರೆ ನಾಗರಿಕರು ಉಜಿರೆಯಲ್ಲಿ ಅವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಆರ್ ಎಂ ಅರ್ಥ್ ಮೂವರ್ಸ್ ರವಿ ಚಕ್ಕಿತ್ತಾಯ, ಶಶಿಧರ್ ಎಂ ಕಲ್ಮಂಜ, ಶ್ರೀಧರ್ ಎಂ ಕಲ್ಮಂಜ, ಜಯಪ್ರಕಾಶ್ ಶೆಟ್ಟಿ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ್ ಕಾರಂತ್, ಉದ್ಯಮಿಗಳಾದ ರಾಮಚಂದ್ರ ಶೆಟ್ಟಿ, ಮಹಾಲಕ್ಷ್ಮಿ ಸ್ಟೋರ್ ಮಾಲಕ ಭರತ್ ಕುಮಾರ್, ಜಯಂತ ಮಡಿವಾಳ ಮುಂಡಾಜೆ, ಉಜಿರೆ ಮೋಹನ್ ಶೆಟ್ಟಿಗಾರ್, ಶ್ರೀನಿವಾಸ್ ಎಡಪಡಿತ್ತಾಯ, ಕಾಮಧೇನು ಮಾಧವ ಹೊಳ್ಳ, ವಿಶ್ವನಾಥ್ ಶೆಟ್ಟಿ ರಸರಾಗ, ಜಯಪ್ರಕಾಶ್ ಶೆಟ್ಟಿ , ಗ್ರಾ.ಪಂ ಸದಸ್ಯರು , ಉಜಿರೆಯ ಅಂಗಡಿ ಮಾಲಕರು ಉಪಸ್ಥಿತರಿದ್ದರು.