ಮಚ್ಚಿನ: ಗ್ರಾಮ ಪಂಚಾಯತ್ ಮಚ್ಚಿನ, ಸಂಜೀವಿನಿ ಒಕ್ಕೂಟ ಮಚ್ಚಿನ ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕ್ರೀಡಾಕೂಟ ನ.1ರಂದು ನಡೆಸಲಾಯಿತು.
ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಜೇತರಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಬಹುಮಾನ ವಿತರಿಸಿದರು. ಸಂಜೀವಿನಿ ಒಕ್ಕೂಟದ ಎಂ ಬಿ ಕೆ ನೀಶಾಲತಾ, ಎಲ್ ಸಿ ಆರ್ ಪಿ ಶ್ವೇತ ಎಚ್ ಹಾಗೂ ಸದಸ್ಯರು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.