- ದ.ಕ. ಜಿಲ್ಲೆಗೆ ಸುನೀಲ್ ಕುಮಾರ್, ಉಡುಪಿಗೆ ಅಂಗಾರ, ಉತ್ತರ ಕನ್ನಡಕ್ಕೆ ಕೋಟ ಶ್ರೀನಿವಾಸ್ ಪೂಜಾರಿ
ಬೆಂಗಳೂರು: ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ 28 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ನೂತನ ಉಸ್ತುವಾರಿ ಸಚಿವರಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸುನೀಲ್ ಕುಮಾರ್, ಉಡುಪಿ ಜಿಲ್ಲೆಗೆ ಎಸ್. ಅಂಗಾರ, ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಕೋಟಾ ಶ್ರೀನಿವಾಸ ಪೂಜಾರಿ ರವರನ್ನು ನೇಮಕಗೊಳಿಸಲಾಗಿದೆ. ಸುನಿಲ್ ಕುಮಾರ್ರವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ, ರಾಜ್ಯ ಸರಕಾರದ ಇಂಧನ ಸಚಿವರಾಗಿದ್ದಾರೆ.