ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೇತಾಜಿ ಸುಭಾಷ್ಚಂದ್ರ ಬೋಸ್ರವರ ೧೨೫ನೇ ಜನ್ಮದಿನವನ್ನು ಪರಾಕ್ರಮ ದಿವಸವನ್ನಾಗಿ ಆಚರಿಸಲಾಯಿತು.
ವಿದ್ಯಾರ್ಥಿ ಮನ್ವಿತ್ ಕೆ.ವಿ.ಯವರು ದೀಪ ಬೆಳಗಿಸಿ, ನೇತಾಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಹಶಿಕ್ಷಕ ಕಿಶೋರ್ ಕುಮಾರ್ ಬಿ.,ಯವರು ಸುಭಾಷ್ಚಂದ್ರ ಬೋಸ್ರವರ ಜೀವನ ಚರಿತ್ರೆಯ ಬಗ್ಗೆ ತಿಳಿಸಿದರು. ವಿದ್ಯಾರ್ಥಿ ರಾಹುಲ್ ರೈಯವರು ಸ್ವಾತಂತ್ರ ಹೋರಾಟದಲ್ಲಿ ಸುಭಾಷ್ಚಂದ್ರ ಬೋಸ್ರ ಪಾತ್ರದ ಬಗ್ಗೆ ತಿಳಿಸಿದರು. ಸಹಶಿಕ್ಷಕ ಗೋಪಾಲ್ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ವಸಂತ್ ಸ್ವಾಗತಿಸಿ, ಸಹಶಿಕ್ಷಕಿ ಪ್ರೇಮಾ ಬಿ.,ವಂದಿಸಿದರು. ಶಿಕ್ಷಕ-ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.