ಪುತ್ತೂರು: ಒಡಿಯೂರು ಶ್ರೀಗಳ ಷಷ್ಟ್ಯಬ್ದ ಸಂಭ್ರಮದ ಆನಂದೋತ್ಸವ ಮತ್ತು ಒಡಿಯೂರು ರಥೋತ್ಸವಕ್ಕೆ ಪುತ್ತೂರು ಷಷ್ಟ್ಯಬ್ದ ಸಂಭ್ರಮ ಸಮಿತಿಯ ನೇತೃತ್ವದಲ್ಲಿ ಫೆ. 8ರಂದು ಹೊರೆಕಾಣಿಕೆ ಸಮರ್ಪಣೆ ಮಾಡಲಾಯಿತು.
ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ನಾರಾವಿ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಒಡಿಯೂರು ಶ್ರೀಗಳ ಷಷ್ಟ್ಯಬ್ದ ಪುತ್ತೂರು ಸಮಿತಿ ಪ್ರಧಾನ ಕಾರ್ಯದರ್ಶಿ ಹರಿಣಾಕ್ಷಿ ಜೆ.ಶೆಟ್ಟಿ, ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷೆ ನಯನಾ ರೈ, ಕಾರ್ಯದರ್ಶಿ ಶಾರದಾ ಕೇಶವ್, ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಗೌರವಾಧ್ಯಕ್ಷ ದೇವಪ್ಪ ನೋಂಡಾ, ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಒಡಿಯೂರು ಶ್ರೀಗಳ ಷಷ್ಟ್ಯಬ್ದ ಪುತ್ತೂರು ತಾಲೂಕು ಸಮಿತಿ ಪದಾಧಿಕಾರಿಗಳಾದ ಅರುಣ್ ಕುಮಾರ್ ಪುತ್ತಿಲ, ಕುಂಬ್ರ ದುರ್ಗಾಪ್ರಸಾದ್ ರೈ, ಜಯಪ್ರಕಾಶ್ ರೈ, ಮೋನಪ್ಪ ಪೂಜಾರಿ, ರಾಜೇಶ್ವರಿ, ರವಿಪ್ರಸಾದ್ ಶೆಟ್ಟಿ, ರಂಜಿತ್ ಬಂಗೇರ, ಭವಾನಿ ಶಂಕರ್, ಸುಧೀರ್ ನೋಂಡ, ಭಾಸ್ಕರ ಬಾರ್ಯ, ಗ್ರಾಮ ವಿಕಾಸ ಸಂಯೋಜಕರಾದ ಸವಿಆ, ಶಶಿ, ರೇವತಿ, ಮತ್ತಿತರರು ಉಪಸ್ಥಿತರಿದ್ದರು. ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.