ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ ಫೆ..20ರಂದು ದೇವಳದ ವಠಾರದಲ್ಲಿ ನಡೆಯಿತು. ಆಡಳಿತ ಮೊಕ್ತೇಸರ ಯು.ಜಿ.ರಾಧಾ ಅಧ್ಯಕ್ಷತೆ ವಹಿಸಿದ್ದರು. ದೇವಳದ ಆಡಳಿತ ಮಂಡಳಿ, ಬೈಲುವಾರು ಪ್ರಮುಖರು ಮತ್ತು ಕೋರ್ ಕಮಿಟಿ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ಮೊಕ್ತೇಸರರಾದ ರಾಜೀವ ರೈ ಅಲಿಮಾರ, ದಿವಾಕರ ಶೆಟ್ಟಿ ಕಾರ್ನೋಜಿ, ರಾಜೇಶ್ ಶಾಂತಿನಗರ, ರಮೇಶ್ ಗೌಡ ಬೇರಿಕೆ, ಬೈಲುವಾರು ಮುಖ್ಯಸ್ಥರಾದ ಗೋಪಾಲಕೃಷ್ಣ ಭಟ್ ಮತ್ತು ಮೋನಪ್ಪ ಗೌಡ ಪಮ್ಮನಮಜಲು ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.