ಪುತ್ತೂರು: ನೆಟ್ಟಣಿಗೆಮುಡ್ನೂರು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದು, ಸರಕಾರದ ಆದೇಶ ಮತ್ತು ನ್ಯಾಯಾಲಯದ ಮಧ್ಯಂತರ ತೀರ್ಪು ಪಾಲಿಸುತ್ತಿಲ್ಲ ಎಂದು ಆರೋಪಿಸಿ ನೆಟ್ಟಣಿಗೆಮುಡ್ನೂರು ಗ್ರಾ.ಪಂ ಸದಸ್ಯ ಚಂದ್ರಹಾಸ ಎಮ್ ಅವರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ದೂರು ನೀಡಿದ್ದಾರೆ.
ನೆಟ್ಟಣಿಗೆಮುಡ್ನೂರು ಸರಕಾರಿ ಶಾಲೆಯಲ್ಲಿ ಸರಕಾರದ ಆದೇಶ ಮತ್ತು ನ್ಯಾಯಾಲಯದ ಮಧ್ಯಂತರ ತೀರ್ಪು ಪಾಲಿಸುತ್ತಿಲ್ಲ. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಶಾಲೆಗೆ ಬರುತ್ತಿದ್ದಾರೆ. ಈ ಕುರಿತು ಸೂಕ್ತ ಕ್ರಮ ಕೈಗೊಂಡು ಸರಕಾರದ ಆದೇಶ ಪಾಲನೆಯಾಗುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.