ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಶಸ್ವಿಯಾಗಿ ನಡೆದ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಕೃತಜ್ಞತಾ ಸಮರ್ಪಣೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಸಭೆಯು ಎ.24ರಂದು ಸಂಜೆ ಗಂಟೆ 5ಕ್ಕೆ ದೇವಳದ ಸಭಾಭವನದಲ್ಲಿ ನಡೆಯಲಿದೆ.
ಜಾತ್ರೋತ್ಸವ ಸಂಪ್ರದಾಯ ಬದ್ದವಾಗಿ ಉತ್ತಮ ರೀತಿಯಲ್ಲಿ ನಡೆದಿದ್ದು, ಜಾತ್ರೋತ್ಸವದ ಯಶಸ್ವಿಗೆ ಶ್ರಮಿಸಿದವರಿಗೆ ಕೃತಜ್ಞತಾ ಸಮರ್ಪಣೆ ಮತ್ತು ಕಾರ್ಯಕರ್ತರಿಗೆ ಅಭಿನಂದನೆಯನ್ನು ಸಲ್ಲಿಸುವ ನಿಟ್ಟಿನಲ್ಲಿ ಸಭೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಹೆಚ್ ಅವರು ತಿಳಿಸಿದ್ದಾರೆ.