ಪುತ್ತೂರು: ತಾಲ್ಲೂಕು ಬಂಟರ ಸಂಘದ ಆಶ್ರಯದಲ್ಲಿ ಎ. 30 ರಂದು ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯ ಬಯಲು ರಂಗಮಂಟಪದಲ್ಲಿ ನಡೆಯಲಿರುವ ಬಂಟ್ರೆ ಗೌಜಿ ಕಾರ್ಯಕ್ರಮದ ಸಿದ್ದತೆ ಬಗ್ಗೆ ತಾಲೂಕು ಯುವ ಬಂಟರ ಸಂಘದ ಸಭೆ ಹಾಗೂ ಅಮಂತ್ರಣ ಪತ್ರ ಬಿಡುಗಡೆ ಎ. 25 ರಂದು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು. ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಕ್ರಷ್ಣ ಪ್ರಸಾದ್ ಆಳ್ವ, ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ, ಕಾರ್ಯದರ್ಶಿ ಪ್ರಜ್ವಲ್ ರೈ, ಕೋಶಾಧಿಕಾರಿ ಅಶೋಕ್ ರೈ ಕೆ.ಸಿ, ಜೊತೆ ಕಾರ್ಯದರ್ಶಿ ರಂಜಿನಿ ಶೆಟ್ಟಿ , ವಿದ್ಯಾರ್ಥಿ ಬಂಟರ ಸಂಘದ ಅಧ್ಯಕ್ಷ ಪವನ್ ಶೆಟ್ಟಿ , ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ರೈ ಸಾರಕೆರೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ಗಣೇಶ್ ಶೆಟ್ಟಿ ನಲ್ಲಿಕಟ್ಟೆ, ಹರ್ಷ ಕುಮಾರ್ ರೈ ಮಾಡಾವು, ಭಾಸ್ಕರ ರೈ ಬಂಟರಭವನ ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.