![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: 2021-22ನೇ ಸಾಲಿನ ೭ನೇ ತರಗತಿ ಮತ್ತು ೧೦ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ಸಹಾಯಕ ನಿರ್ದೇಶಕರು (ಗ್ರೇಡ್ 1 ಮತ್ತು 2), ಸಮಾಜ ಕಲ್ಯಾಣ ಇಲಾಖೆ, ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಮತ್ತು ಸುಳ್ಯ ತಾಲೂಕು ಕಛೇರಿಗಳಿಂದ ಪಡೆದು, ಭರ್ತಿ ಮಾಡಿ ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ, ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರದ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ, ಸಂಬಂಧಪಟ್ಟ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಕಛೇರಿಯಲ್ಲಿ ಜೂ.30 ರ ಸಂಜೆ 5.30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08251298803, 9480843115 ಸಂಪರ್ಕಿಸಬಹುದು ಎಂದು ಪ್ರಟಕಟಣೆ ತಿಳಿಸಿದೆ.