ಪುತ್ತೂರು: ಕಲಿಯುಗ ಕಲೆ, ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಜೂ.5ರಂದು ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.
ಕ್ಷೇತ್ರದಲ್ಲಿ ಪ್ರತಿ ತಿಂಗಳ ಸಂಕ್ರಮಣದಂದು ರಾತ್ರಿ ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಗಳ ಕೋಲ, ಅಗೇಲು ಸೇವೆ ನಡೆಯುತ್ತದೆ. ಪ್ರತಿ ಆದಿತ್ಯವಾರ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ, ಪ್ರತಿ ಮಂಗಳವಾರ, ಶುಕ್ರವಾರ ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ ನಡೆಯುತ್ತದೆ. ಈ ಎಲ್ಲಾ ದಿನಗಳಲ್ಲಿಯೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯುತ್ತದೆ. ಅಲ್ಲದೆ ಪ್ರತಿ ಸೋಮವಾರ ಮತ್ತು ಶನಿವಾರ ಪ್ರಶ್ನಾ ಚಿಂತನೆಯೂ ನಡೆಯುತ್ತದೆ ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.
ಇಂದು ಮಾನೆಚ್ಚಿಲ್ ಸೇವೆ: ಜೂ. 7ರಂದು ಬೆಳಿಗ್ಗೆ ಕ್ಷೇತ್ರದಲ್ಲಿ ಸ್ವಾಮಿ ಕೊರಗಜ್ಜ ದೈವದ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ ನಡೆಯಲಿದೆ ಎಂದು ಧರ್ಮದರ್ಶಿ ತಿಳಿಸಿದ್ದಾರೆ.