ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ಳಿಪ್ಪಾಡಿ ಒಕ್ಕೂಟದ ವತಿಯಿಂದ ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಗೌಡ ಕೈಲಾಜೆರವರು ಬೆಳ್ಳಿಪ್ಪಾಡಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಆವರಣಕ್ಕೆ ಇಂಟರ್ ಲಾಕ್ ಅಳವಡಿಸಲು 25 ಸಾವಿರ ರೂಪಾಯಿಯನ್ನು ಎಸ್. ಡಿ. ಎಂ. ಸಿ. ಅಧ್ಯಕ್ಷೆ ಭವ್ಯ ವಿ. ಶೆಟ್ಟಿಯವರ ಸಮ್ಮುಖದಲ್ಲಿ ಶಾಲೆಗೆ ಹಸ್ತಾಂತರಿಸಿದರು.
ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಗೌಡ ಗುಂಡೋಲೆ, ಗ್ರಾ. ಪಂ. ಮಾಜಿ ಸದಸ್ಯ ಮನೋಹರ ಗೌಡ ದೇವಸ್ಯ, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷೆ ಜಲಜಾಕ್ಷಿ ಬಾಲಚಂದ್ರ ಗೌಡ, ಮುಖ್ಯಗುರು ಯಶೋದಾ, ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.