ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾ.ಪಂ.ನ ಸಾಮಾನ್ಯ ಸಭೆ ಜೂ.೩೦ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ.ಅಧ್ಯಕ್ಷ ಜನಾರ್ದನ ಪಟೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಹಸಿ ಮೀನು ಮಾರಾಟದ ಹಕ್ಕು ಏಲಂ ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಕುಡಿಯುವ ನೀರಿನ ಸಮಿತಿ ಸಭೆ ಕರೆದು ಜಲ ಜೀವನ್ ಮಿಷನ್ ಯೋಜನೆಯ ಮಾಹಿತಿ ನೀಡಲು ತೀರ್ಮಾನಿಸಲಾಯಿತು. 15ನೇ ಹಣಕಾಸು ಯೋಜನೆಯ 2022-23ನೇ ಸಾಲಿನ ಕ್ರೀಯಾ ಯೋಜನೆ ತಯಾರಿಸಲಾಯಿತು. ಗ್ರಾ.ಪಂ.ಉಪಾಧ್ಯಕ್ಷೆ ಶೋಭಾಲತಾ ಕೋಲ್ಪೆ, ಸದಸ್ಯರಾದ ಶಿವಪ್ರಸಾದ್, ಬಾಬು ಪೂಜಾರಿ ಕಿನ್ಯಡ್ಕ, ಪದ್ಮನಾಭ, ಗುಲಾಬಿ, ಸವಿತಾ, ಶೃತಿ, ಜಾನಕಿ, ನೋಣಯ್ಯ ಗೌಡ, ವಿ.ಸಿ.ಜೋಸೆಫ್, ಪ್ರಜಲ, ಸಂಧ್ಯಾ, ವಾರಿಜಾಕ್ಷಿ, ಜೀವಿತಾ, ಬಾಲಕೃಷ್ಣ ಅಲೆಕ್ಕಿ, ಹೇಮಲತಾ ಉಪಸ್ಥಿತರಿದ್ದರು. ಪಿಡಿಒ ಜಗದೀಶ್ ನಾಯ್ಕ್ರವರು ಸ್ವಾಗತಿಸಿ, ಸಾರ್ವಜನಿಕ ಅರ್ಜಿ, ಸರಕಾರದ ಸುತ್ತೋಲೆಗಳನ್ನು ಸಭೆಗೆ ಮಂಡಿಸಿದರು. ಕಾರ್ಯದರ್ಶಿ ಚಂದ್ರಾವತಿ ವಂದಿಸಿದರು. ಸಿಬ್ಬಂದಿಗಳಾದ ಬಾಬು ನಾಯ್ಕ್, ಪುಷ್ಪಾಜಯಂತ್, ಯಶವಂತ, ದಿನೇಶ್, ಕೀರ್ತಿಕಾ ಸಹಕರಿಸಿದರು.