ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

0

ನೆಲ್ಯಾಡಿ: ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವತಿಯಿಂದ ಉಚಿತ ಉಚಿತ ಸಮವಸ್ತ್ರವನ್ನು ಜು.18ರಂದು ವಿತರಿಸಲಾಯಿತು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ನಿಂಗಯ್ಯರವರು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಶುಭ ಹಾರೈಸಿದರು. ಸುಬ್ರಹ್ಮಣ್ಯ ದೇವಾಲಯದ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯ ಕಿಶೋರ್ ಕುಮಾರ್ ಕೂಜುಗೋಡು ಮತ್ತು ಚಂದ್ರಶೇಖರ ಮರ್ದಾಳರವರು ಸಂದರ್ಭೋಚಿತವಾಗಿ ಮಾತನಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಪ್ರಥಮ ದರ್ಜೆ ಸಹಾಯಕ ಶಿವಸುಬ್ರಹ್ಮಣ್ಯರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯಗುರು ಗಣೇಶ ವಾಗ್ಲೆಯವರು ನಿರೂಪಿಸಿದರು.ವಿದ್ಯಾಲಯದ ಆಡಳಿತ ಸಮಿತಿ ಕಾರ್ಯದರ್ಶಿ ಮೂಲಚಂದ್ರ ಕಾಂಚನ ವಂದಿಸಿದರು.

LEAVE A REPLY

Please enter your comment!
Please enter your name here