ಪುತ್ತೂರು: ಬಿಜೆಪಿಯ ಯುವ ನಾಯಕ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ನಡೆದಿದ್ದ ಅಘೋಷಿತ ಬಂದ್ ವಾಹನ ಜನಸಂಚಾರ ಸ್ಥಗಿತಗೊಂಡಿತ್ತು. ಜು. 28ರಂದು ಜನ ಜೀವನ ಯಥಾಸ್ಥಿತಿಗೆ ಬಂದಿದ್ದು, ಎಂದಿನಂತೆ ವಾಹನ ಸಂಚಾರ, ಜನರ ಸಂಚಾರ ಆರಂಭಗೊಂಡಿದೆ. ಅಂಗಡಿಮುಂಗಟ್ಟುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ.