ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಪುತ್ತೂರು: ಸ್ವಾತಂತ್ರ್ಯ 75ನೇ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿದೇಶ ಸೇವೆಗೆ ಬದ್ಧರಾಗಿದೇಶದ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸೋಣ ಎಂದು ಭಾರತೀಯ ಸೇನೆಯ ನಿವೃತ್ತ ಸೈನಿಕರಾದಶ್ರೀ ಕುಮಾರ್.ಕೆ.ಎಇವರು ಹೇಳಿದರು. ಅವರು ಆ.15ರಂದು ವಿವೇಕಾನಂದಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಜಂಟಿಆಶ್ರಯದಲ್ಲಿ ವಿವೇಕಾನಂದಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿಧ್ವಜಾರೋಹಣಗೈದು ಮಾತನಾಡಿದರು.

 

ಕಾರ್ಯಕ್ರಮದಲ್ಲಿ ವಿವೇಕಾನಂದಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದಡಾ. ಶಿವಪ್ರಕಾಶ್.ಎಂ, ಅಧ್ಯಕ್ಷೀಯ ನೆಲೆಯಲ್ಲಿಮಾತನಾಡಿ, ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವವನ್ನುಅತ್ಯಂತ ವಿಜೃಂಭಣೆಯಿಂದಅಮೃತ ನಡಿಗೆದೇಶದಕಡೆಗೆಎನ್ನುವಧ್ಯೇಯ ವಾಕ್ಯದೊಂದಿಗೆ ವಿವೇಕಾನಂದಸಮೂಹ ಶಿಕ್ಷಣ ಸಂಸ್ಥೆಗಳ 8000 ವಿದ್ಯಾರ್ಥಿಗಳ ಜಾಥಾದ ಮೂಲಕ ವಿವೇಕಾನಂದ ವಿದ್ಯಾವರ್ಧಕ ಸಂಘ ವಿನೂತನವಾಗಿ ಹಮ್ಮಿಕೊಂಡಿತ್ತು. ಇಂದು ೭೫ನೇ ಅಮೃತ ಮಹೋತ್ಸವವನ್ನುಆಚರಿಸುತ್ತಿದ್ದು, ಮುಂದಿನ 25 ವರ್ಷದಲ್ಲಿ ಶತಮಾನೋತ್ಸವನ್ನುಅಚರಿಸಲಿದ್ದೇವೆ. ಅಖಂಡವಾಗಿದ್ದ ಭಾರತ ಮತ್ತೆ ಭಾಗವಾಗದಿರಲಿ ಎಂದುಹಾರೈಸಿದರು.

ವಿವೇಕಾನಂದಆಂಗ್ಲ ಮಾಧ್ಯಮ ಶಾಲೆ ಮತ್ತುವಿವೇಕಾನಂದ ಬಿ.ಎಡ್ ಕಾಲೇಜುಗಳ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ-ರಕ್ಷಕ ಸಂಘದಸದಸ್ಯರು, ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕ, ಶಿಕ್ಷಕೇತರ ವೃಂದಹಾಗೂ ಪೋಷಕರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿವೇಕಾನಂದಬಿ.ಎಡ್‌ ಕಾಲೇಜಿನ ವಿದ್ಯಾರ್ಥಿಗಳು ರಚಿಸಿದ 75 ಸ್ವಾತಂತ್ರ್ಯ ಹೋರಾಟಗಾರರಕುರಿತು ಲೇಖನವನ್ನುಪುಸ್ತಕದ ಮೂಲಕ ಮುಖ್ಯ ಅತಿಥಿಗಳು ಬಿಡುಗಡೆ ಮಾಡಿದರು.

ವಿವೇಕಾನಂದ ಬಿ.ಎಡ್ ಶಿಕ್ಷಕ ವಿದ್ಯಾರ್ಥಿನಿಯರು ವಂದೇಮಾತರಂ ಮತ್ತು ವಿವೇಕಾನಂದಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಗೂ ಧ್ವಜಗೀತೆಯನ್ನು ಹಾಡಿದರು. ವಿವೇಕಾನಂದಆಂಗ್ಲ ಮಾಧ್ಯಮ ಶಾಲಾ ಸಂಚಾಲಕ  ರವಿನಾರಾಯಣ.ಎಂ ಸ್ವಾಗತಿಸಿ, ವಿವೇಕಾನಂದಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯಿನಿ ಸಂಧ್ಯಾ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ವಾಣಿಶ್ರೀ.ಎನ್‌ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ  ದೀಪಕ್‌ಇವರುದೇಶಭಕ್ತಿಯ ಘೋಷಣೆಗಳನ್ನು ಹಾಕಿದರು.ಶಾಲೆಯ ಎನ್.ಸಿ.ಸಿ ಹಾಗೂ ಸ್ಕೌಟ್ಸ್ ವಿದ್ಯಾರ್ಥಿಗಳು ಅತಿಥಿಗಳಿಗೆ ಗೌರವ ಸಲ್ಲಿಸಿದ್ದರು. ದೈಹಿಕಶಿಕ್ಷಣ ಶಿಕ್ಷಕರು ಸಹಕರಿಸಿದರು.

LEAVE A REPLY

Please enter your comment!
Please enter your name here