ಆ.26 :ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆ ಚಿಂತನೆಯ ಪರಿಹಾರ ಪ್ರಾಯಶ್ಚಿತ ಕಾರ್ಯಕ್ರಮ

0

ಚಿನ್ನದ ತ್ರಿನೇತ್ರ ಸೇರಿದಂತೆ ವಿವಿಧ ಸಮರ್ಪಣೆಗಳು

ಪುತ್ತೂರು:ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ದೈವಜ್ಞರು ತಿಳಿಸಿದ ಪ್ರಕಾರ ವಿವಿಧ ಪರಿಹಾರ ಕಾರ್ಯಕ್ರಮಗಳು ಆ.26ರ ಬೆಳಗ್ಗೆ ಗಂಟೆ ೯ರಿಂದ ಬ್ರಹ್ಮಶ್ರೀ ವೇ.ಮೂ.ರವೀಶ ತಂತ್ರಿ, ಕುಂಟಾರುರವರ ನೇತೃತ್ವದಲ್ಲಿ ಜರಗಲಿರುವುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ತಿಳಿಸಿದ್ದಾರೆ.

ದೈವಜ್ಞರ ನಿರ್ದೇಶನದಂತೆ ಸೀಮೆಯ ಎಲ್ಲಾ ಭಕ್ತಾದಿಗಳು, ವ್ಯವಸ್ಥಾಪನಾ ಸಮಿತಿ, ಅಽಕಾರಿ ವರ್ಗ, ಚಾಕರಿಯವರು ಸೇರಿಕೊಂಡು ಈ ಪರಿಹಾರ ಸೇವೆಗಳು ನಡೆಯಲಿದೆ.ಪರಿಹಾರ ಕಾರ್ಯಕ್ರಮದಲ್ಲಿ 12 ತೆಂಗಿನಕಾಯಿ ಗಣಪತಿ ಹವನ, ಶತರುದ್ರಾಭಿಷೇಕ, ಪವಮಾನ ಅಭಿಷೇಕ ಸಹಿತ ಪರಿವಾರ ದೇವರುಗಳಿಗೆ, ದೈವಗಳಿಗೆ ವಿಶೇಷ ಪೂಜೆ ನಡೆಯಲಿದೆ. ಇದರ ಜೊತೆಗೆ ವಿವಿಧ ಸಮರ್ಪಣೆಗಳು ನಡೆಯಲಿದೆ.ದೇವರಿಗೆ ಒಂದು ಚಿನ್ನದ ತ್ರಿನೇತ್ರ ಸಮರ್ಪಣೆ ಮಾಡಲಾಗುವುದು.ಭಕ್ತರು ಚಿನ್ನದ ತುಂಡು, ಬೆಳ್ಳಿಯ ತುಂಡು, ೫ ರೂಪಾಯಿ ಒಳಗಿನ ಚಲಾವಣೆಯಲ್ಲಿರುವ ನಾಣ್ಯಗಳ ಸಹಿತ ಅಭಿಷೇಕಕ್ಕೆ ಯೋಗ್ಯವಾದುದನ್ನು ಬೆಳ್ಳಿಯ ಕಲಶದಲ್ಲಿ ಹಾಕಲು ಅವಕಾಶವಿದೆ. ಒಂದು ಕೋಲು ಎತ್ತರದ ಬೆಳ್ಳಿಯ ತುಪ್ಪ ದೀಪವನ್ನು ದೇವರಿಗೆ ಸಮರ್ಪಿಸಿ ಪ್ರಾರ್ಥಿಸಲಾಗುವುದು.ಹನ್ನೊಂದು ರುದ್ರರನ್ನು ಸಂಕಲ್ಪಿಸಿ ಸಕಲೋಪಚಾರಗಳಿಂದ ಪೂಜಿಸಿ, ವೈದಿಕರಿಗೆ ವಸ ಉತ್ತರೀಯ ಊಟೋಪಚಾರ ಕೊಟ್ಟು ಯಥಾ ಶಕ್ತಿ ದ್ರವ್ಯ ಗಂಟು ಕಟ್ಟಿ ಸಮರ್ಪಿಸಿ ಆಶೀರ್ವಾದ ಪೂರ್ವಕ ಮಂತ್ರಾಕ್ಷತೆ, ಪ್ರತಿವಚನೆ ಪಡೆಯುವ ಕಾರ್ಯಕ್ರಮ ನಡೆಯಲಿದೆ.ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here