ಸೆ. 10: ಪುತ್ತೂರು ಪ್ರಶಾಂತ್ ಮಹಲ್‌ನಲ್ಲಿ ವಿದ್ಯಾನಿಧಿ-ಧನಸಹಾಯ ವಿತರಣೆ

0

ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸೆ. 10 ರಂದು ಬೆಳಿಗ್ಗೆ 11.30ಕ್ಕೆ ದರ್ಬೆ ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್‌ನಲ್ಲಿ ವಿದ್ಯಾನಿಧಿ- ಧನಸಹಾಯ ವಿತರಣೆ ನಡೆಯಲಿದೆ. ಕಾರ್‍ಯಕ್ರಮದಲ್ಲಿ ಪ್ರತಿ ವಿದ್ಯಾರ್ಥಿಗೆ ರೂ 2000 ದಂತೆ 200 ವಿದ್ಯಾರ್ಥಿಗಳಿಗೆ ಧನ ಸಹಾಯವನ್ನು ನೀಡಲಾಗುವುದು. ಸಮಾರಂಭದ ಅಧ್ಯಕ್ಷತೆ ಶಾಸಕ ಸಂಜೀವ ಮಠಂದೂರುರವರು ವಹಿಸಲಿದ್ದು, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್‌ರವರು ಉದ್ಘಾಟನೆ ನೇರವೇರಿಸಲಿದ್ದು, ದ.ಕ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸುಧಾಕರ್‌ರವರು ಸಹಾಯಧನವನ್ನು ವಿತರಣೆ ಮಾಡಲಿದ್ದಾರೆ. ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ತ್ರಿವೇಣಿ ರಾವ್‌ರವರು ಮುಖ್ಯ ಅತಿಥಿಯಾಗಿ ಬಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here