ಪ್ರಧಾನಿ ನರೇಂದ್ರ ಮೋದಿಯವರ ಶ್ರೇಯಸ್ಸಿಗೆ ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥಣೆ

0

ಪುತ್ತೂರು:ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸೆ.17ರಂದು ಸಂಕ್ರಮಣದ ಅಂಗವಾಗಿ ನಡೆದ ರಂಗಪೂಜೆ ಸಂದರ್ಭದಲ್ಲಿ ತನ್ನ 72ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಶ್ರೇಯಸ್ಸು, ದೀರ್ಘಾಯಸ್ಸು ವೃದ್ಧಿಗಾಗಿ ದೇವರಲ್ಲಿ ವಿಶೇಷ ಪ್ರಾರ್ಥಣೆ ಸಲ್ಲಿಸಲಾಯಿತು.

ಕುಕ್ಕಾಡಿ ಪ್ರೀತಂ ತಂತ್ರಿಯವರು ಪ್ರಾರ್ಥನೆ ಸಲ್ಲಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಪುರಸಭಾ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here