ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದಿಂದ ಆರ್ಥಿಕ ನೆರವು

0

ಕಡಬ: ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಗ್ರಾಹಕರಾಗಿದ್ದು ಅನಾರೋಗ್ಯದಿಂದ ಮೃತಪಟ್ಟ ಆಲಂಕಾರು ನಿವಾಸಿ ಮಹೇಶ ಕಯ್ಯಪ್ಪೆಯವರ ಕುಟುಂಬಕ್ಕೆ ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದಿಂದ 5 ಸಾವಿರ ರೂ., ಆರ್ಥಿಕ ನೆರವು ನೀಡಲಾಯಿತು.

ಸಂಘದ ಅಧ್ಯಕ್ಷ ಮುತ್ತಪ್ಪ ಪೂಜಾರಿ ನೈಯ್ಯಲ್ಗರವರು ಮೃತ ಮಹೇಶ ಕಯ್ಯಪ್ಪೆರವರ ಪತ್ನಿ ವಿಶಾಲಾಕ್ಷಿಯವರಿಗೆ ಆರ್ಥಿಕ ನೆರವು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವಸಂತಪೂಜಾರಿ ಬದಿಬಾಗಿಲು, ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಿಂಗಪ್ಪ ಪೂಜಾರಿ ನೈಯ್ಯಲ್ಗ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here