ನೆಲ್ಯಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ; ಉದನೆ ಬಿಷಪ್ ಪಬ್ಲಿಕ್ ಸ್ಕೂಲ್‌ಗೆ ಪ್ರಥಮ ಸಮಗ್ರ ಪ್ರಶಸ್ತಿ

0

ನೆಲ್ಯಾಡಿ: ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆದ ನೆಲ್ಯಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಉದನೆ ಬಿಷಪ್ ಪಬ್ಲಿಕ್ ಸ್ಕೂಲ್‌ಗೆ ಪ್ರಥಮ ಸಮಗ್ರ ಪ್ರಶಸ್ತಿ ಲಭಿಸಿದೆ.


ಕಿರಿಯ ವಿಭಾಗದ ಕನ್ನಡ ಕಂಠಪಾಠ- ಅನ್ಷಿ, ಲಘು ಸಂಗೀತ-ಮನ್ವಿತ್ ಬಿ.ಜೆ, ಆಶುಭಾಷಣ-ಅವನಿ, ಹಿರಿಯ ವಿಭಾಗದ ಇಂಗ್ಲೀಷ್ ಕಂಠಪಾಠ-ರೋಶಿನಿ, ಆಶುಭಾಷಣ -ಭವಿಕ್ ಕುಮಾರ್, ಕ್ಲೇ ಮಾಡಲಿಂಗ್-ಧನುಷ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕಿರಿಯ ವಿಭಾಗದ ಇಂಗ್ಲಿಷ್ ಕಂಠಪಾಠ-ಪೂರ್ವಿ ಪಿ.ಕೆ., ಧಾರ್ಮಿಕ ಪಠಣ ಅರೇಬಿಕ್-ಅಲ್ಫ ಫಾತಿಮಾ ದ್ವಿತೀಯ ಸ್ಥಾನ, ಕಿರಿಯ ವಿಭಾಗದಲ್ಲಿ ಭಕ್ತಿಗೀತೆ -ಮನ್ವಿತ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಒಟ್ಟು 13 ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಚಾಲಕ ರೆ.ಫಾ ಹನಿ ಜೇಕಬ್, ಮುಖ್ಯಗುರುಗಳು, ಶಿಕ್ಷಕ ಶಿಕ್ಷಕೇತರ ವೃಂದದವರು ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here