ಕುರಿಯ ಒಕ್ಕಲಿಗ ಗೌಡ ಸೇವಾ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

0

  • ಗ್ರಾಮ ಸಮಿತಿ ಅಧ್ಯಕ್ಷರಾಗಿ ರವಿನಾಥ ಗೌಡ ಸಂಪ್ಯಬೈಲಾಡಿ
  • ಯುವ ಘಟಕದ ಅಧ್ಯಕ್ಷರಾಗಿ ಮನೋಜ್ ಕುಮಾರ್
  • ಮಹಿಳಾ ಘಟಕದ ಅಧ್ಯಕ್ಷರಾಗಿ ಗವಿತ್ರ ಗಡಾಜೆ

ಕುರಿಯ :ಒಕ್ಕಲಿಗ ಗೌಡ ಸೇವಾ ಸಂಘ ಕುರಿಯ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ಸೆ 4 ರಂದು ಕುರಿಯ ಉಳ್ಳಾಲ ಮಹಾವಿಷ್ಣುಮೂರ್ತಿ ದೇವಾಲಯದಲ್ಲಿ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ,ಮಕ್ಕಳಿಕೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ನಡೆಯಿತು.

ಕುರಿಯ ಒಕ್ಕಲಿಗ ಗೌಡ ಸೇವಾ ಸಂಘದ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿನಾಥ ಗೌಡ ಸಂಪ್ಯಬೈಲಾಡಿ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಗೌಡ ಹೊಸಮಾರು,ಯುವ ಘಟಕದ ಅಧ್ಯಕ್ಷರಾಗಿ ಮನೋಜ್ ಹೊಸಮಾರು ಪ್ರಧಾನ ಕಾರ್ಯದರ್ಶಿಯಾಗಿ ಭವಿತ್ ಗೌಡ ಇಡಬೆಟ್ಟು,ಮಹಿಳಾ ಘಟಕದ ಅಧ್ಯಕ್ಷರಾಗಿ ಗವಿತ್ರ ಗಡಾಜೆ ಪ್ರಧಾನ ಕಾರ್ಯದರ್ಶಿಯಾಗಿ ಸರೋಜಿನಿ ಬೂಡಿಯರು ಇವರುಗಳನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತುರು ಇದರ ಕಾರ್ಯದರ್ಶಿ ದಯಾನಂದ ಕೆ ಎಸ್,ಸುರೇಶ್ ಗೌಡ,ಮಹಿಳಾ ಘಟಕದ ಕಾರ್ಯದರ್ಶಿ ಸಂಧ್ಯಾ ಶಶಿಧರ್,ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ದಿವ್ಯಪ್ರಸಾದ್ ಎ ಎಂ, ಒಕ್ಕಲಿಗ ಸ್ವ ಸಹಾಯ ಸಂಘ ಕುಂಬ್ರ ವಲಯದ ಅಧ್ಯಕ್ಷರಾದ ಲೋಕೇಶ್ ಚಾಕೋಟೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಮೇಲ್ವಿಚಾರಕಾರದ ವಿಜಯ ಕುಮಾರ್, ಪ್ರೇರಕರಾದ ಶ್ರೀಕಾಂತ್ ಗೌಡ,ಗ್ರಾಮ ಸಮಿತಿ ನಿಕಟಪೂರ್ವ ಅಧ್ಯಕ್ಷ ರಮಾನಾಥ ಸಂಪ್ಯಬೈಲಾಡಿ,ಆನಂದ ಗೌಡ ನೈತಾಡಿ, ಶಿವರಾಮ ಗೌಡ ಜಾಡೆಂಕಿ, ಯುವ ಘಟಕದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಕೈಂತಿಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here