ಬೆಂಗಳೂರು ವಿ.ವಿ ಸಿಂಡಿಕೇಟ್ ಪ್ರಾಧಿಕಾರಕ್ಕೆ ನೆಕ್ಕಿಲಾಡಿಯ ಹರೀಶ್ ನಾಯ್ಕ್ ನಾಮನಿರ್ದೇಶನ

0

ಪುತ್ತೂರು : ಬೆಂಗಳೂರು ದಕ್ಷಿಣ ಜಿಲ್ಲೆಯ ಆನೆಕಲ್ ತಾಲೂಕಿನ ಜಿಗಣಿಯಲ್ಲಿರುವ ನಳಿನಿ ರಘುನಾಥ ರಾವ್ ಪದವಿ ಕಾಲೇಜುನಲ್ಲಿ 15 ವರುಷಗಳಿಂದ ಶೈಕ್ಷಣಿಕ ಸೇವೆ ಸಲ್ಲಿಸಿರುವ ಪ್ರಾ೦ಶುಪಾಲ ಪ್ರೋ.ಹರೀಶ್ ನಾಯ್ಕ್‌ರವರನ್ನು ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ಸದಸ್ಯರಾಗಿ ಒಂದು ವರುಷದ ಅವಧಿಗೆ ನಾಮನಿರ್ದೇಶನ ಮಾಡಲಾಗಿದೆ. ನೆಕ್ಕಿಲಾಡಿ ಗ್ರಾಮದ ಶಾಂತಿನಗರ ನಿವಾಸಿಯಾಗಿರುವ ಲಕ್ಷ್ಮಣ ನಾಯ್ಕ್ ಮತ್ತು ವಿಮಲ ದಂಪತಿ ಪುತ್ರರಾಗಿರುವ ಇವರು ಉಪ್ಪಿನಂಗಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢಶಾಲೆ, ಸರಕಾರಿ ಪದವಿ ಪೂರ್ವ ಕಾಲೇಜು, ಸರಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ವ್ಯಾಸಂಗ ನಡೆಸಿ, ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಎಂ. ಕಾಂ. ಪದವಿ ಪಡೆದಿದ್ದರು. ಪ್ರಸ್ತುತ ಇವರು ಬೆಂಗಳೂರುನಲ್ಲಿ ವಾಸ್ತವ್ಯ ಹೊಂದಿದ್ದಾರೆ.

LEAVE A REPLY

Please enter your comment!
Please enter your name here