ಶ್ರೀವರ್ಣ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ವತಿಯಿಂದ ಅ.7 ಮತ್ತು 8ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವೈಯುಕ್ತಿಕ ಚಾಂಪಿಯನ್‌ಶಿಪ್ ಪಡೆದಿರುವ ಶ್ರೀವರ್ಣ ಪಿ.ಡಿ.ರವರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಹೈಜಂಪ್, ಲಾಂಗ್‌ಜಂಪ್, 80 ಮೀಟರ್ ಹರ್ಡಲ್ಸ್ ಮತ್ತು 4*100 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ವೈಯುಕ್ತಿಕ ಚಾಂಪಿಯನ್‌ಶಿಪ್ ಪಡೆದು ಬಳ್ಳಾರಿಯಲ್ಲಿ ಅ.11ರಿಂದ 14ರವರೆಗೆ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಶ್ರೀವರ್ಣ ಪಿ.ಡಿ.ರವರು ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಬೆಳ್ಳಿಪ್ಪಾಡಿ ಗ್ರಾಮದ ಪಾಲೆತ್ತಡಿ ನಿವಾಸಿಗಳಾದ ಧರ್ಣಪ್ಪ ಗೌಡ ಮತ್ತು ಮಮತಾ ಪಿ. ದಂಪತಿಯ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here