ಅ.22: ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ನೂತನ ಪಾಕಶಾಲೆ ಸೀತಾಮೃತಂ, ಶೌಚಾಲಯ ಉದ್ಘಾಟನೆ

0

ನೆಲ್ಯಾಡಿ: ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದಲ್ಲಿ ನೂತನ ಪಾಕಶಾಲೆ ಸೀತಾಮೃತಂ ಮತ್ತು ಶೌಚಾಲಯ ಘಟಕದ ಉದ್ಘಾಟನೆ ಹಾಗೂ ವಿದ್ಯಾಭಾರತಿಯ ಕ್ರೀಡಾ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಾಲಾ ತಂಡಕ್ಕೆ ಅಭಿನಂದನಾ ಕಾರ್ಯಕ್ರಮ ಅ.22ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಸಂಸದ ನಳಿನ್‌ಕುಮಾರ್ ಕಟೀಲ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಕೃಷ್ಣ ಶೆಟ್ಟಿ ಕಡಬ, ಎಸ್.ಎಂ.ಅಟುಡೆ ಸಂಸ್ಥೆಯ ಜನರಲ್ ಮ್ಯಾನೇಜರ್ ಎ.ಮಹೇಶ್ವರ ರೆಡ್ಡಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಆಡಳಿತ ಸಮಿತಿ ಅಧ್ಯಕ್ಷ ಡಾ.ಮುರಳೀಧರ, ಕಾರ್ಯದರ್ಶಿ ಮೂಲಚಂದ್ರ ಕಾಂಚನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here