ಲಕ್ಷ್ಮೀದೇವಿ ಬೆಟ್ಟಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ

0

 

ಪುತ್ತೂರು:ರೈಲು ನಿಲ್ದಾಣದ ಬಳಿಯಿರುವ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅ.೨೩ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯರವರು ಮುತಾಲಿಕ್‌ರವರನ್ನು ಸ್ವಾಗತಿಸಿ, ಫಲಪುಷ್ಪ ನೀಡಿ ಗೌರವಿಸಿದರು. ಬಳಿಕ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿಗಳನ್ನು ವೀಕ್ಷಣೆ ನಡೆಸಿದ ಮುತಾಲಿಕ್‌ರವರು ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಬೆಟ್ಟ ಕ್ಷೇತ್ರದ ಹಿನ್ನೆಲೆ ಹಾಗೂ ಜೀರ್ಣೋದ್ಧಾರ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.

ಬಳಿಕ ಭೋಜನ ಸೇವಿಸಿ, ವಿಶ್ರಾಂತಿ ಪಡೆದು ತೆರಳಿದರು. ಶ್ರೀರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್, ನವೀನ್ ಕುಲಾಲ್, ಧನ್ಯಕುಮಾರ್ ಬೆಳಂದೂರು,ಸನಾತನ ಸಂಸ್ಥೆಯ ದಯಾನಂದ, ಲಕ್ಷ್ಮೀಪ್ರಸಾದ್ ಬೆಟ್ಟ, ಜನಾರ್ದನ ಬೆಟ್ಟ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here