ವಿಟ್ಲ: ಬೆಂಕಿಗಾಹುತಿಯಾದ ಓಮ್ನಿ-ಪ್ರಯಾಣಿಕರು ಅಪಾಯದಿಂದ ಪಾರು

0

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.


ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ವಿಟ್ಲ ಸಮೀಪ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬಗ್ಗೆ ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ವಾಹನ ನಿಲ್ಲಿಸಿ ಹೊರಗಡೆ ಬಂದಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ವಿನಯ ಎಂಬವರ ಸರ್ವೀಸ್ ಸ್ಟೇಷನ್ ನಿಂದ ನೀರು ಹರಿಸಲಾಯಿತು. ಘಟನೆಯಲ್ಲಿ ವಾಹನ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

LEAVE A REPLY

Please enter your comment!
Please enter your name here