![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ವೈದ್ಯಕೀಯ ತಜ್ಞ ಡಾ|ನಝೀರ್ ಅಹಮ್ಮದ್ ಡಯಾಬೆಟ್ಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಮತ್ತು ಮೆಕ್ಲಿಯೋಯ್ಡ್ ಕಂಪೆನಿ ಸಹಯೋಗದಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣಾ ಶಿಬಿರ ನ.10 ರಂದು ಕಲ್ಲಾರೆ ಕೃಷ್ಣಾ ಆರ್ಕೆಡ್ನಲ್ಲಿರುವ ಡಾ|ನಝೀರ್ ಅಹಮ್ಮದ್ರವರ ಕ್ಲಿನಿಕ್ನಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಿತು.
ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತ, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು ಅಥವಾ ಕಡಿಮೆ ಆಗುವುದು, ಹೆಂಗಸರಿಗೆ ಅತಿಯಾದ ಮಾಸಿಕ ಸ್ರಾವ ಅಥವಾ ನಿಯಮ ತಪ್ಪಿದ ಮಾಸಿಕ ಸ್ರಾವ, ಮೃದುವಾದ ಕರ್ಕಶ ಸ್ವರ, ಗಂಟಲಿನಲ್ಲಿ ಊದುಕೊಳ್ಳುವಿಕೆ, ಅಧಿಕ ಎದೆ ಬಡಿತ ಅಥವಾ ರಕ್ತದೊತ್ತಡವುಳ್ಳ 56 ಮಂದಿ ಫಲಾನುಭವಿಗಳು ಶಿಬಿರದಲ್ಲಿ ಪಾಲ್ಗೊಂಡು ಡಾ.ನಝೀರ್ ಅಹಮ್ಮದ್ರವರಲ್ಲಿ ಸೂಕ್ತ ಮಾಹಿತಿ ಪಡೆದುಕೊಂಡರು. ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಅಧ್ಯಕ್ಷ ಗಣೇಶ್ ಕಲ್ಲರ್ಪೆ ಉಪಸ್ಥಿತರಿದ್ದರು. ಮೆಕ್ಲಿಯೋಯ್ಡ್ ಕಂಪೆನಿಯ ವೀರೇಂದ್ರ, ಎಸ್ಆರ್ಎಲ್ ಲ್ಯಾಬ್ನ ಚಂದ್ರಕಲಾ ಹಾಗೂ ಡಾ.ನಝೀರ್ ಅಹಮ್ಮದ್ರವರ ಕ್ಲಿನಿಕ್ನ ಸಿಬ್ಬಂದಿಗಳು ಸಹಕರಿಸಿದರು.