ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ ಮಾಚಿಲ ಶ್ರೀ ಉಳ್ಳಾಕುಲು ಉಳ್ಳಾಲ್ತಿ ದೈವದ ಪ್ರತಿಷ್ಠೆ- ಪೂರ್ವಭಾವಿ ಸಭೆ

0

ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ..
ಗೌರವಾಧ್ಯಕ್ಷರಾಗಿ ಯು.ಪಿ ರಾಮಕೃಷ್ಣ ಗೌಡ, ಅಧ್ಯಕ್ಷರಾಗಿ ಪ್ರದೀಪ್ ಆರ್ ಗೌಡ ಅರುವಗುತ್ತು,
ಪ್ರಧಾನ ಕಾರ್ಯದರ್ಶಿಯಾಗಿ ಜತ್ತಪ್ಪ ಗೌಡ ಉದ್ಲಡ್ಡ

ಕಾಣಿಯೂರು: ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಠಬಂದ ಬ್ರಹ್ಮಕಲಶೋತ್ಸವ ಹಾಗೂ ಮಾಚಿಲ ಶ್ರೀ ಉಳ್ಳಾಕುಲು ಉಳ್ಳಾಲ್ತಿ ದೈವದ ಪ್ರತಿಷ್ಠೆಯು ಡಿ31 ರಿಂದ ಜ7 ರವರೆಗೆ ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿ ಸಭೆಯು ದೇವಸ್ಥಾನದಲ್ಲಿ ನಡೆಯಿತು. ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ, ಶ್ರೀ ಮಾಚಿಲ ಉಳ್ಳಾಲ್ತಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸಿ.ಜೆ ಚಂದ್ರಕಲಾ ಜಯರಾಮ್ ಅರುವಗುತ್ತು, ಅಧ್ಯಕ್ಷ ವೆಂಕಪ್ಪ ಗೌಡ ಮಾಚಿಲ, ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಳದ ಮೊಕ್ತೇಸರರಾದ ಮಾಚಿಲ ನಾರ್ಣಪ್ಪ ಗೌಡ, ಶ್ರೀ ಮಾಚಿಲ ಉಳ್ಳಾಲ್ತಿ ಕ್ಷೇತ್ರದ ಕ್ಷೇತ್ರಶರಾದ ಮಾಚಿಲ ಪೆರ್ಗಡೆ ಗೌಡ, ಆಡಳಿತ ಪಂಗಡದ ಸಂಚಾಲಕ ಸುಂದರ ದೇವಸ್ಯ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು, ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ವಿಶ್ವನಾಥ ಅಂಬುಲ ಸ್ವಾಗತಿಸಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜತ್ತಪ್ಪ ಗೌಡ ಉದ್ಲಡ್ಡ ವಂದಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಯು.ಪಿ ರಾಮಕೃಷ್ಣ ಗೌಡ, ಅಧ್ಯಕ್ಷರಾಗಿ ಪ್ರದೀಪ್ ಆರ್ ಗೌಡ ಅರುವಗುತ್ತು, ಪ್ರಧಾನ ಕಾರ್ಯದರ್ಶಿಯಾಗಿ ಜತ್ತಪ್ಪ ಗೌಡ ಉದ್ಲಡ್ಡ, ಉಪಾಧ್ಯಕ್ಷರಾಗಿ ಪ್ರವೀಣ್ ಕುಂಟ್ಯಾನ, ದೇವಯ್ಯ ಗೌಡ ಖಂಡಿಗ, ವಿಜಯಕುಮಾರ್ ಸೊರಕೆ, ಕೋಶಾಧಿಕಾರಿಯಾಗಿ ವಿಶ್ವನಾಥ ಅಂಬುಲ, ಜತೆ ಕಾರ್ಯದರ್ಶಿಯಾಗಿ ವಿಜಿತ್ ಮಾಚಿಲರವನ್ನು ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here