ದೆಹಲಿಯಲ್ಲಿ ನಡೆದ ಆಮ್ ಆದ್ಮಿ ಪಕ್ಷದ ವಿಜಯೋತ್ಸವದಲ್ಲಿ ಮುಂಡೂರು ಗ್ರಾ.ಪಂ ಸದಸ್ಯ ಮಹಮ್ಮದ್ ಆಲಿ ಭಾಗಿ

0

ಪುತ್ತೂರು: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಏರಿರುವ ಹಿನ್ನೆಲೆಯಲ್ಲಿ ಪುತ್ತೂರು ಆಮ್ ಆದ್ಮಿ ಪಕ್ಷದ ಮುಖಂಡರು, ಮುಂಡೂರು ಗ್ರಾ.ಪಂ ಸದಸ್ಯರೂ ಆಗಿರುವ ಮಹಮ್ಮದ್ ಆಲಿ ನೇರೋಳ್ತಡ್ಕ ಅವರು ಡಿ.7ರಂದು ದೆಹಲಿಯಲ್ಲಿ ಪಕ್ಷದ ಕಾರ್ಯಕರ್ತರ ವಿಜಯೋತ್ಸವದಲ್ಲಿ ಭಾಗವಹಿಸಿದ್ದಾರೆ.

ಗೆಲುವು ಸಾಧಿಸಿರುವ ಆಮ್ ಆದ್ಮಿ ಪಕ್ಷದ ಮುಖಂಡರೊಂದಿಗೂ ಮಹಮ್ಮದ್ ಆಲಿಯವರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತದಾರರು ಪಾಲಿಕೆ ಚುನಾವಣೆಯಲ್ಲೂ ಆಮ್ ಆದ್ಮಿ ಪಕ್ಷವನ್ನೇ ಚುನಾಯಿಸಿದ್ದಾರೆ ಎಂದು ಮಹಮ್ಮದ್ ಆಲಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here