ಡಿ.10: ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದ ಪ್ರಥಮ ವಾರ್ಷಿಕೋತ್ಸವ-ಸಾರ್ವಜನಿಕ ಶ್ರೀ ದುರ್ಗಾಪೂಜೆ

0

ಪುತ್ತೂರು: ಸ್ವಸ್ತಿಕ್ ಗೆಳೆಯರ ಬಳಗ ನೆಕ್ಕಿಲು ಇದರ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ದುರ್ಗಾ ಪೂಜೆ, ಸಭಾ ಕಾರ್ಯಕ್ರಮ, ಅನ್ನ ಸಂತರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಿ.10ರಂದು ನಡೆಯಲಿದೆ.

ಸಂಜೆ ಗಂಟೆ 6-೦೦ಕ್ಕೆ ದುರ್ಗಾ ಪೂಜೆ ನಡೆಯಲಿದ್ದು ಸಂಜೆ ಗಂಟೆ 7-೦೦ಕ್ಕೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಗಂಟೆ 7-3೦ಕ್ಕೆ ಮಹಾಪೂಜೆ ನಡೆಯಲಿದೆ. ರಾತ್ರಿ ಗಂಟೆ 8-೦೦ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ನಿವೃತ್ತ ಪ್ರಾಂಶುಪಾಲರಾದ ಬಿ.ವಿ ಸೂರ್ಯನಾರಾಯಣ ಕಣ್ಣಾರಾಯರವರು ಉಪನ್ಯಾಸ ನೀಡಲಿದ್ದಾರೆ.

ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದ ಅಧ್ಯಕ್ಷ ಹರೀಶ್ ನಾಯ್ಕ ಎಲಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಉದ್ಯಮಿ ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಗೌಡ ಎಲಿಯ, ಪ್ರಗತಿಪರ ಕೃಷಿಕ ಉಮೇಶ್ ಸುವರ್ಣ ಸೊರಕೆ ಮೊದಲಾದವರು ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 9-೦೦ಕ್ಕೆ ಅನ್ನ ಸಂತರ್ಪಣೆ ನಡೆಯಲಿದ್ದು ಆ ಬಳಿಕ ಬೊಳ್ಳಿ ಸಂಸಾರ ಕಲಾವಿದೆರ್ ಪುತ್ತೂರು ಅಭಿನಯಿಸುವ `ಭಾಗ್ಯ ಬೋಡು’ ತುಳು ಕುತೂಹಲ ಭರಿತ ನಾಟಕ ನಡೆಯಲಿದೆ ಎಂದು ಸ್ವಸ್ತಿಕ್ ಗೆಳೆಯರ ಬಳಗದ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here