ಆಲಂಕಾರು : ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರೌಡಶಾಲೆಯ ವಿದ್ಯಾರ್ಥಿನಿಯರು ರೂಪಿಕಾ.ಬಿ ಹಾಗು ಕಾವ್ಯ.ಕೆ ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಆಲಂಕಾರು: ಆಲಂಕಾರು ದುರ್ಗಾಂಬಾ ಪದವಿ ಪೂರ್ವ ಕಾಲೇಜು ಇದರ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿನಿಯರಾದ ರೂಪಿಕಾ ಬಿ ಮತ್ತು ಕಾವ್ಯ. ಕೆ ರವರು ಸಬ್ ಜೂನಿಯರ್ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ ಯಾಗಿರುತ್ತಾರೆ.

 ರೂಪಿಕಾ ಬಿ ಅವರು ಬಿ ಕುಶಾಲಪ್ಪ ಗೌಡ ಬಡ್ಡಮೆ ಮತ್ತು ಗೀತಾ ದಂಪತಿಗಳ ಪುತ್ರಿ, ಹಾಗೂ  ಕಾವ್ಯ ಕೆ ಅವರು ರಾಮಕೃಷ್ಣ ಗೌಡ ಪಿ ಮತ್ತು ಮೋಹಿನಿ ದಂಪತಿಗಳ ಪುತ್ರಯಾಗಿರುತ್ತಾರೆ.

ಇವರಿಗೆ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕ ಶ್ರೇಯಸ್ಸು ರೈ ಯು ರವರು ತರಬೇತಿ ನೀಡಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶ್ರೀ ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ದಯಾನಂದ ರೈ ಮನವಳಿಕೆ, ಕಾರ್ಯದರ್ಶಿಗಳಾದ ಈಶ್ವರ ಗೌಡ ಪಜ್ಜಡ್ಕ ಹಾಗೂ ಎಲ್ಲಾ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಸಂಸ್ಥೆಯ ಪ್ರಾಂಶುಪಾಲರು, ಮುಖ್ಯಗುರುಗಳು, ಉಪನ್ಯಾಸಕ ವೃಂದ, ಅಧ್ಯಾಪಕ ವೃಂದ , ಬೋಧಕೇತರ ವೃಂದದವರು, ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು,ಹಿರಿಯ ವಿದ್ಯಾರ್ಥಿ ಸಂಘ,ಶಿಕ್ಷಕ,ರಕ್ಷಕ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ,ಸದಸ್ಯರು ವಿದ್ಯಾರ್ಥಿ ನಿಯರಿಗೆ ಶುಭ ಹಾರೈಸಿರುತ್ತಾರೆ.

LEAVE A REPLY

Please enter your comment!
Please enter your name here