ಕೌಡಿಚ್ಚಾರ್ ಶ್ರೀಕೃಷ್ಣ ಭಜನಾ ಮಂದಿರದ ಜೀರ್ಣೊದ್ಧಾರ ಕಾರ್ಯ: ಕಾವು ತುಡರ್ ಯುವಕ ಮಂಡಲದಿಂದ ರೂ.25,555 ದೇಣಿಗೆ

0

ಕಾವು: ಪುನರ್ ನಿರ್ಮಾಣಗೊಂಡು ಜ.೭ರಂದು ಪ್ರತಿಷ್ಠಾ ಮಹೋತ್ಸವ ನಡೆಯಲಿರುವ ಕೌಡಿಚ್ಚಾರ್ ಶ್ರೀಕೃಷ್ಣ ಭಜನಾ ಮಂದಿರದ ಜೀರ್ಣೊದ್ಧಾರ ಕಾರ್ಯಕ್ಕೆ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ ವತಿಯಿಂದ ರೂ.25,555/- ದೇಣಿಗೆ ನೀಡಲಾಯಿತು.


ಜ.9ರಂದು ಸಂಜೆ ಕೌಡಿಚ್ಚಾರ್ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಯುವಕ ಮಂಡಲದ ಅಧ್ಯಕ್ಷ ಜಗದೀಶ ನಾಯ್ಕ ಆಚಾರಿಮೂಲೆಯವರು ಮಂದಿರದ ಅಧ್ಯಕ್ಷ ರಾಮದಾಸ ರೈಯವರಿಗೆ ದೇಣಿಗೆ ಹಸ್ತಾಂತರ ಮಾಡಿದರು.

 


ಈ ಸಂದರ್ಭದಲ್ಲಿ ತುಡರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಆಚಾರ್ಯ ನನ್ಯ, ಸಂಘಟನಾ ಕಾರ್ಯದರ್ಶಿ ರಾಮಣ್ಣ ನಾಯ್ಕ ಆಚಾರಿಮೂಲೆ, ಭಜನಾ ಸಂಘದ ಅಧ್ಯಕ್ಷ ಸಂಕಪ್ಪ ಪೂಜಾರಿ ಚಾಕೋಟೆ, ಕಾರ್ಯದರ್ಶಿ ಲಿಂಗಪ್ಪ ನಾಯ್ಕ ನನ್ಯ, ಮಾಜಿ ಅಧ್ಯಕ್ಷ ಸುನೀಲ್ ನಿಧಿಮುಂಡ, ಸದಸ್ಯರಾದ ನಿರಂಜನ ರಾವ್, ಬಾಲಕೃಷ್ಣ ಪಾಟಾಳಿ, ಸಂದೇಶ್ ಚಾಕೋಟೆ, ಹರ್ಷಿತ್ ಎ.ಆರ್, ಕೌಡಿಚ್ಚಾರ್ ಶ್ರೀಕೃಷ್ಣ ಭಜನಾ ಮಂದಿರದ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here