ಮಿತ್ತೂರು: ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾಗಿದ್ದ ಪ್ರಕರಣ – ಆರೋಪಿಯ ಬಂಧನ

0

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ರೈಲ್ವೇ ಬ್ರಿಡ್ಜ್ ಬಳಿ ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಮುನ್ನಿಮಾರು ನಿವಾಸಿ ನಾರಾಯಣ ಪೂಜಾರಿಯವರ ಪುತ್ರ ರಾಜೇಶ್ (40 ವ.) ಬಂಧಿತ ಆರೋಪಿ.

ಕೋಡಿಂಬಾಡಿ ಗ್ರಾಮದ ಶಾಂತಿನಗರ ನಿವಾಸಿ ಬಾಲಕೃಷ್ಣ ಶೆಟ್ಟಿಯವರ ಪತ್ನಿ ಶಾಲಿನಿ ಶೆಟ್ಟಿರವರು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಬಿಳಿ ಬಣ್ಣದ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೋರ್ವರು ಅವರ ಕುತ್ತಿಗೆಯಲ್ಲಿದ್ದ 20 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದರು. ಈ ಬಗ್ಗೆ ಶಾಲಿನಿಯವರು ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕರಾದ ರುಕ್ಮ ನಾಯ್ಕ, ಸಿಬ್ಬಂದಿಗಳಾದ ಜಯರಾಮ ಕೆ.ಟಿ., ರಕ್ಷಿತ್, ಕರುಣಾಕರ, ಹೇಮರಾಜ್, ಮನೋಜ್ ಕುಮಾರ್ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here