ಇಂದು (ದ.17): ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ, ದ. 18: ಸಾಂಸ್ಕೃತಿಕ ಹಬ್ಬ

0

ಬೆಟ್ಟಂಪಾಡಿ: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ದ. 17 ಹಾಗೂ 18 ರಂದು ನಡೆಯಲಿದೆ.


ದ. 17 ರಂದು ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತರಾದ ಗಿರೀಶ್ ನಂದನ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್‌ ಆರ್, ವಿವೇಕಾನಂದ‌ ವಿದ್ಯಾವರ್ಧಕ ಸಂಘದ ನಿರ್ದೇಶಕ ಶಿವಪ್ರಸಾದ್ ಇ., ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಬೆಂಗಳೂರಿನ ಮಾಲ್‌ಕ್ಯುಲರ್ ಕನೆಕ್ಷನ್ ಪ್ರೈ ಲಿ. ಉದ್ಯೋಗಿ ಪ್ರಜ್ಞಾ ರೈ ಭಾಗವಹಿಸಲಿದ್ದಾರೆ.

ದ. 18 ರಂದು ಸಂಜೆ ನಡೆಯಲಿರುವ ‘ಸಾಂಸ್ಕೃತಿಕ ಸಂಭ್ರಮ’ದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗ ಪೊಲೀಸ್ ಉಪ ಅಧೀಕ್ಷಕ ವೀರಯ್ಯ ಹಿರೇಮಠ, ಸಿಬಿಐ ಬೆಂಗಳೂರಿನ ಪಬ್ಲಿಕ್ ಪ್ರಾಸಿಕ್ಯೂಟರ್ ಶಿವಾನಂದ ಪೆರ್ಲ, ಚಲನಚಿತ್ರ ನಟ ದೀಪಕ್ ರೈ ಪಾಣಾಜೆ, ಯಕ್ಷಗಾನ ಕಲಾವಿದ ಚನಿಯಪ್ಪ ನಾಯ್ಕ ಭಾಗವಹಿಸಲಿದ್ದಾರೆ.

ಎರಡು ದಿನಗಳ‌ ಕಾಲ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ ಜರಗಲಿದೆ ಎಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಂಗನಾಥ ರೈ ಗುತ್ತು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here