ಡಿ.18: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಇದರ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸನ್ಮಾನ

0

ಪುತ್ತೂರು: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ, ಶಾಂತಿನಗರ ವಿಟ್ಲ ಇದರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಡಿ.18ರಂದು ವಿಟ್ಲ ಶಾಂತಿನಗರ ಅಕ್ಷಯ ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 7-೦೦ಕ್ಕೆ ಗಣಪತಿ ಹೋಮ ಮತ್ತು ಗಂಟೆ 8-೦೦ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು ಗಂಟೆ 10-30ರಿಂದ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ನಡೆಯಲಿದೆ. ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ ಮೋನಪ್ಪ ಗೌಡ ಶಿವಾಜಿನಗರ ಸಭಾಧ್ಯಕ್ಷತೆ ವಹಿಸಲಿದ್ದು ಕರ್ನಾಟಕ ರಾಜ್ಯ ಒಕ್ಕಲಿಗ ಸಂಘ ಬೆಂಗಳೂರು ಇದರ ಅಧ್ಯಕ್ಷ ಸಿ.ಎನ್ ಬಾಲಕೃಷ್ಣ ಗೌಡ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಅಧ್ಯಕ್ಷ ಡಾ.ಕೆ.ವಿ ಚಿದಾನಂದ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಉಪಾಧ್ಯಕ್ಷ ಡಾ.ಕೆ.ವಿ ರೇಣುಕಾ ಪ್ರಸಾದ್, ದ.ಕ ಜಿಲ್ಲಾ ಗೌಡ ಸೇವಾ ಸಂಘ ಮಂಗಳೂರು ಇದರ ಅಧ್ಯಕ್ಷ ಲೋಕಯ್ಯ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪುತ್ತೂರು ಇದರ ಅಧ್ಯಕ್ಷ ಮನೋಹರ ಡಿ.ವಿ, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಇದರ ಗೌರವಾಧ್ಯಕ್ಷ ಮೋಹನ್ ಕಾಯರ್‌ಮಾರ್ ಗೌರವ ಉಪಸ್ಥಿತರಿರಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಪದಗ್ರಹಣ ಸಮಾರಂಭ:
ಕಾರ್ಯಕ್ರಮದಲ್ಲಿ ಕುಳ, ಇಡ್ಕಿದು, ನೆಟ್ಲಮುಡ್ನೂರು, ಕೆದಿಲ, ಪುಣಚ, ಬಿಳಿಯೂರು, ಪೆರ್ನೆ, ವಿಟ್ಲಮುಡ್ನೂರು ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ ನಡೆಯಲಿದೆ.

ದಿವ್ಯಪ್ರಭಾ ಗೌಡರಿಗೆ ಸನ್ಮಾನ:
ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಪುತ್ತೂರು ಇದರ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುತ್ತಾ ನಿರಂತರವಾಗಿ ಸಹಕಾರವನ್ನು ನೀಡುತ್ತಾ ಬಂದಿರುವ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here