ದ.ಕ ಜಿಲ್ಲಾ ತೆಂಗು ರೈತ ಸಂಸ್ಥೆಯಿಂದ ಸುರಕ್ಷಾ ವಿಮಾ ವಿತರಣೆ

0

ಪುತ್ತೂರು: ಬಂಟ್ವಾಳ ತಾಲೂಕಿನ ತೆಂಗಿನ ಮರ ಹತ್ತುವ ಕಾರ್ಮಿಕರಿಗೆ ಭಾರತ ಸರ್ಕಾರವು ಕೊಡಲ್ಪಡುವ ಕೇರಾ ಸುರಕ್ಷಾ ವಿಮಾ ಯೋಜನೆಯನ್ನು ಡಿ.21 ರಂದು ದ.ಕ ಜಿಲ್ಲಾ ತೆಂಗು ರೈತ ಉತ್ಪಾದಕ ಕಂಪೆನಿಯ ವಿಟ್ಲ ಕೇಂದ್ರ ಕಚೇರಿಯಲ್ಲಿ ವಿತರಿಸಲಾಯಿತು.

ಬಂಟ್ವಾಳ ತಾಲೂಕಿನ 29ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಂಡಿರುತ್ತಾರೆ. ಮುಂದಿನ ದಿನಗಳಲ್ಲಿ ನೊಂದಾಯಿಸಲ್ಪಟ್ಟ ಫಲಾನುಭವಿಗಳಿಗೆ ಜಿಲ್ಲೆಯ ಆಯಾ ಆಯಾ ತಾಲೂಕುಗಳಲ್ಲಿ ಸುರಕ್ಷಾ ವಿಮಾ ಪತ್ರವನ್ನು ವಿತರಿಸಲಾಗುವುದು ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here