ಓಜಾಲ ಶಾಲೆಯಲ್ಲಿ ಮಕ್ಕಳ ಉದ್ಯಾನವನ ಉದ್ಘಾಟನೆ

0

ವಿಟ್ಲ: ಓಜಾಲ ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ಮಕ್ಕಳ ಉದ್ಯಾನವನವನ್ನು ರೋಟರಿಯ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಉದ್ಘಾಟಿಸಿದರು.

ರೋಟರಿ ಕ್ಲಬ್ ಪುತ್ತೂರು ಸಿಟಿಯ ಅಧ್ಯಕ್ಷ ಪ್ರಶಾಂತ ಶೆಣೈ , ಮಾಜಿ ಜಿಲ್ಲಾ ಗವರ್ನರ್ ಎಂ. ರಂಗನಾಥ್ ಭಟ್, ಕಾರ್ಯದರ್ಶಿ ಜಯ ಗುರು ಆಚಾರ್ಯ ರ ಸಹಿತ ರೋಟರಿ ಕ್ಲಬ್ ಪುತ್ತೂರು ಸಿಟಿಯ ಸದಸ್ಯರು, ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷ ಎಂ.ಸುಧೀರ್ ಕುಮಾರ್ ಶೆಟ್ಟಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ ದಾಸ್ ಭಕ್ತ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಚಿದಾನಂದ ಪೆಲತ್ತಿಂಜ ಮೊದಲಾದವರು ಉಪಸ್ಥಿತರಿದ್ದರು.
ಹಿರಿಯ ಶಿಕ್ಷಕಿ ವಿಲ್ಮಾ ಸಿಕ್ವೇರಾ ಸ್ವಾಗತಿಸಿ, ಮುಖ್ಯ ಶಿಕ್ಷಕ ಸಂಜೀವ ಮಿತ್ತಳಿಕೆ ವಂದಿಸಿದರು.

LEAVE A REPLY

Please enter your comment!
Please enter your name here