![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಮತದಾರರ ಪರಿಷ್ಕರಣೆ, ಮುಂಬರುವ ಚುನಾವಣೆ, ಕೋವಿಡ್ ಮಾರ್ಗಸೂಚಿ ಸಹಿತ ವಿವಿಧ ವಿಷಯಗಳ ಕುರಿತು ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿ ಡಿ.27ರಂದು ಬೆಳಿಗ್ಗೆ ಪುತ್ತೂರು ತಾಲೂಕು ಆಡಳಿತ ಸೌಧದ ಎಸಿ ಕೋರ್ಟ್ ಹಾಲ್ನಲ್ಲಿ ಉನ್ನತಮಟ್ಟದ ಅಧಿಕಾರಿಗಳ ಆಂತರಿಕ ಸಭೆ ನಡೆಸಿದರು.
ಪುತ್ತೂರು ಉಪವಿಭಾಗದ ಆಯುಕ್ತ ಗಿರೀಶ್ ಕುಮಾರ್, ತಹಶೀಲ್ದಾರ್ ನಿಸರ್ಗಪ್ರಿಯ, ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ತಹಸೀಲ್ದಾರ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮಾಂತರ ಪೊಲೀಸ್ ನಿರೀಕ್ಷಕರು ಸಭೆಯಲ್ಲಿ ಉಪಸ್ಥಿತರಿದ್ದರು. ಬೆಳಗ್ಗಿನಿಂದ ಮಧ್ಯಾಹ್ನ ಗಂಟೆ 12ರ ತನಕ ಸಭೆ ನಡೆಸಿದ ಜಿಲ್ಲಾಧಿಕಾರಿಯವರು ಮಧ್ಯಾಹ್ನದ ಬಳಿಕ ಸುಳ್ಯಕ್ಕೆ ತೆರಳಿರುವುದಾಗಿ ತಿಳಿದು ಬಂದಿದೆ.