ಗಣರಾಜ್ಯೋತ್ಸವ ಫೆರೇಡ್‌ಗೆ ಆಯ್ಕೆಯಾದ ಡಾ| ವಜೀದಾ ಬಾನುರವರಿಗೆ ಕಾವು ಹೇಮನಾಥ್ ಶೆಟ್ಟಿಯಿಂದ ಗೌರವಾರ್ಪಣೆ

0

ಪುತ್ತೂರು: 2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇಡ್‌ನಲ್ಲಿ ಭಾಗವಹಿಸಲು ಆಯ್ಕೆಯಾದ ಪುತ್ತೂರಿನ ಡಾ| ವಜಿದಾಬಾನುರವರನ್ನು ಕಾಂಗ್ರೆಸ್ ಮುಖಂಡ ಕಾವು ಹೇಮನಾಥ್ ಶೆಟ್ಟಿಯವರು ತನ್ನ ಕಛೇರಿಯಲ್ಲಿ ಶಾಲು ಹೊದಿಸಿ ಗೌರವಿಸಿ ಶುಭಾಹಾರೈಸಿದರು.

ಅರಿಯಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಕಲಾ ಚೌಟ, ಎನ್‌ಎಸ್‌ಯು ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬೆ, ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ ಅನ್ವರ್ ಖಾಸಿಂ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಗಣೇಶ್ ಶೆಟ್ಟಿ, ರವಿಪ್ರಸಾದ್ ಶೆಟ್ಟಿ, ಗಂಗಾಧರ ಶೆಟ್ಟಿ, ಇಸಾಕ್ ಸಾಲ್ಮರ, ಸಂಶುದ್ದೀನ್ ಅಜ್ಜಿನಡ್ಕ, ಡಾ| ವಾಸ್ತವಿ ಶೆಟ್ಟಿ, ಡಾ| ಸಂಜನಾ ಶೆಟ್ಟಿ, ರಂಜಿತಾ ಶೆಟ್ಟಿ ಉಪಸ್ಥಿತರಿದ್ದರು.

ಎನ್‌ಎಸ್‌ಎಸ್ ವತಿಯಿಂದ ದಕ್ಷಿಣ ಪ್ರಾಂತೀಯ ಪ್ರೀಆರ್‌ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಡಾ| ವಜಿದಾಬಾನುರ ಒಬ್ಬರಾಗಿದ್ದಾರೆ. ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಯ ಪುತ್ರಿ. ಪ್ರಸ್ತುತ ಎಜೆ ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿದ್ದು ಇತ್ತೀಚೆಗೆ ನಡೆದ ಪದವಿಪ್ರದಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಈ ಸಾಲಿನಲ್ಲಿ ಆರು ವಿಷಯಗಳಲ್ಲಿ ರ್‍ಯಾಂಕ್ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here