ಜ.30 ವಳಾಲು ಹಾ.ಉ.ಸ.ಸಂಘದ ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ, ನಾಮಫಲಕ ಅನಾವರಣ

0

ನೆಲ್ಯಾಡಿ: ಬಜತ್ತೂರು ಗ್ರಾಮದ ವಳಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ಕಾರ್ಯಕ್ರಮ ಜ.೩೦ರಂದು ಬೆಳಿಗ್ಗೆ ೧೦.೩೦ಕ್ಕೆ ಸಂಘದ ವಠಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಪಿ.ವಸಂತ ಗೌಡ, ಉಪಾಧ್ಯಕ್ಷ ಸುಧಾಕರ ಎಸ್., ಕಾರ್ಯನಿರ್ವಹಣಾಧಿಕಾರಿ ಪದ್ಮಾವತಿ ಹಾಗೂ ನಿರ್ದೇಶಕರು ತಿಳಿಸಿದ್ದಾರೆ.

ಶಾಸಕ ಸಂಜೀವ ಮಠಂದೂರು ಅವರು ಬಿ.ಎಂ.ಸಿ.ಕಟ್ಟಡ ಉದ್ಘಾಟಿಸಲಿದ್ದಾಋಎ. ದ.ಕ.ಜಿ.ಸ.ಹಾ.ಉ.ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರು ಸಾಂದ್ರ ಶೀತಲೀಕರಣ ಘಟಕ ಉದ್ಘಾಟಿಸಲಿದ್ದಾರೆ. ದ.ಕ.ಜಿ.ಸ.ಹಾ.ಉ.ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ್ಜ ನಾಮಫಲಕ ಅನಾವರಣಗೊಳಿಸಲಿದ್ದಾರೆ. ದ.ಕ.ಜಿ.ಸ.ಹಾ.ಉ.ಒಕ್ಕೂಟದ ನಿರ್ದೇಶಕರಾದ ನಿರಂಜನ್ ಬಿ., ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್ ಕೆ., ಸವಿತಾ ಎನ್.ಶೆಟ್ಟಿ. ವ್ಯವಸ್ಥಾಪಕ ನಿರ್ದೇಶಕ ಡಿ.ಅಶೋಕ್, ಪುತ್ತೂರು ಉಪವಿಭಾಗದ ಸಹಕಾರಿ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ಕೆ., ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು ಇದರ ಯೋಜನಾಧಿಕಾರಿ ಆನಂದ ಕೆ., ಬಜತ್ತೂರು ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ ಬಿ., ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದ.ಕ.ಜಿ.ಸ.ಹಾ.ಉ.ಒಕ್ಕೂಟದ ವ್ಯವಸ್ಥಾಪಕ ಡಾ| ನಿತ್ಯಾನಂದ ಭಕ್ತ, ಉಪವ್ಯವಸ್ಥಾಪಕ ಡಾ| ಡಿ.ಆರ್.ಸತೀಶ್ ರಾವ್, ಬಿಎಂಸಿ ಉಪವ್ಯವಸ್ಥಾಪಕ ಡಾ| ಕೇಶವ ಸುಳ್ಳಿ, ಪಶು ವೈದ್ಯಾಧಿಕಾರಿ ಡಾ.ಜಿತೇಂದ್ರ ಪ್ರಸಾದ್, ವಿಸ್ತರಣಾಧಿಕಾರಿ ಮಾಲತಿ ಪಿ., ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here