ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

0

ಪುತ್ತೂರು : ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಯಲ್ಲಿ 2022-23ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಮಾ.11ರಂದು ನಡೆಸಲಾಯಿತು.


ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಜಯರಾಮ ಕೆದಿಲಾಯ ಶಿಬರ ರವರು ಮಾತನಾಡಿ ಜೀವನದಲ್ಲಿ ಆಕಸ್ಮಿಕವಾಗಿ ಬರುವ ಕಷ್ಟಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿರಬೇಕು. ಜೀವನದ ಮೌಲ್ಯಗಳನ್ನು ಭಗವದ್ಗೀತೆಗೆ ಅನುಗುಣವಾಗಿ ಶ್ರೀಕೃಷ್ಣನನ್ನು ಆರಾಧಿಸುತ್ತ ಸಮಾಜದಲ್ಲಿ ಸಜ್ಜನರಾಗಿ ಬಾಳಿ ಎಂದು ಆಶೀರ್ವದಿಸಿದರು.

ಶಾಲಾ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರು ಮಾತನಾಡಿ ಸಮಾಜದಲ್ಲಿ ಪ್ರತಿಫಲವನ್ನು ಅಪೇಕ್ಷಿಸದೆ ಸಹಾಯ ಮಾಡುವ ಮನೋಭಾವ ಹಾಗೂ ಎಲ್ಲರು ಗುರುತಿಸಿಕೊಳ್ಳುವ ಸ್ವಭಾವ ನಿಮ್ಮದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾತನಾಡಿ ಮಕ್ಕಳನ್ನು ಹುರಿದುಂಬಿಸಿದರು.

ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು ಮಾತನಾಡಿ ಮುಂದೆ ಬರುವ ಪರೀಕ್ಷೆ ಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಉತ್ತಮ ಪ್ರಜೆಗಳಾಗಿ ಎಂದು ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಭಾಸ್ಕರ ಆಚಾರ್, ಕಾರ್ಯದರ್ಶಿಗಳಾದ ಕೃಷ್ಣ ಪ್ರಸಾದ್ ಕೆದಿಲಾಯ, ಸದಸ್ಯರಾದ ಹರೀಶ್ ಪುತ್ತೂರಾಯ, ಸುಬ್ರಾಯ ಬಿ.ಎಸ್, ಮುಖ್ಯೋಪಾಧ್ಯಾಯನಿ ಜಯಮಾಲ ವಿ.ಎನ್, ಶಿಕ್ಷಕ- ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಅಧ್ಯಕ್ಷರು ಕೃಷ್ಣನ ವಿಗ್ರಹ ನೀಡಿ ಆಶೀರ್ವದಿಸಿದರು.

ಶಾಲಾ ಶಿಕ್ಷಕಿ ಶ್ರೀಮತಿ ಉಷಾ ಪ್ರಾರ್ಥಿಸಿದರು. ವಾಣಿ ವಂದಿಸಿ , ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here