ರಾಮಕುಂಜ ಕ.ಮಾ.ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಮಧುಗಿರಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.


ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಶಮೀಮ ಬಾನು (ನೆಕ್ಕರೆ ಆದಂ ಹಾಗೂ ಅಲಿಮಮ್ಮ ದಂಪತಿಯ ಪುತ್ರಿ)ರವರು 17ರ ವಯೋಮಿತಿಯ ವಿಭಾಗದ ಜಾವಲಿನ್ ಎಸೆತದಲ್ಲಿ ತೃತೀಯ ಸ್ಥಾನ ಹಾಗೂ 8ನೇ ತರಗತಿಯ ವಿದ್ಯಾರ್ಥಿ ಚರಣ್ (ಕೊಯಿಲ ಕೆ.ಸಿ. ಫಾರ್ಮ್ ಧರ್ಣಪ್ಪ ಗೌಡ ಹಾಗೂ ಜಯಂತಿ ದಂಪತಿಯ ಪುತ್ರ) ರವರು 14ರ ವಯೋಮಿತಿ ವಿಭಾಗದ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರಿಗೆ ಶಾಲೆಯ ಮುಖ್ಯಗುರು ಸತೀಶ್ ಭಟ್‌ರವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈಯವರು ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here