ನಾಳೆ(ಫೆ.19) ಪುತ್ತೂರಲ್ಲಿ ಜಾನಪದ ಕಲಾವಿದ ಚೋಮ ಬೆಟ್ಟಂಪಾಡಿಯವರ 75 ರ ಸಂಭ್ರಮ

0

ಪುತ್ತೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇದರ ಸಹಕಾರದೊಂದಿಗೆ ಜಾನಪದ ಕಲಾವಿದ ಚೋಮ ಬಿ.ಬೆಟ್ಟಂಪಾಡಿ ಇವರ 75 ನೇ ವರ್ಷದ ಸಂಭ್ರಮ ಫೆ.19 ರಂದು ಅಪರಾಹ್ನ ಮಂಜಲ್ಪಡ್ಪು ಸುದಾನ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯಲಿದೆ.

ಸುದಾನ ವಿದ್ಯಾಸಂಸ್ಥೆಯ ಮುಖ್ಯಸ್ಥ ವಿಜಯ ಹಾರ್ವಿನ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಅತಿಥಿಗಳಾಗಿ ವಕೀಲರಾದ ಫಝಲ್ ರಹೀಂ, ತುಳು ಅಕಾಡೆಮಿ ಮಾಜಿ ರಿಜಿಸ್ಟ್ರಾರ್ ಚಂದ್ರಹಾಸ ರೈ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ ಶಿವಾನಂದ, ದಲಿತಾ ಸೇವಾ ಸಮಿತಿ ಅಧ್ಯಕ್ಷ ಶೇಷಪ್ಪ ಬೆದ್ರಕಾಡು, ಬಿ.ಕೆ ಕೃಷ್ಣಪ್ಪ ಪಂಡಿತ್, ಆಯುರ್ವೆದ ವೈದ್ಯ ಚಿದಾನಂದ, ವಕೀಲ ಕುಂಬ್ರ ದುರ್ಗಾಪ್ರಸಾದ್ ರೈ, ಸಂಗೀತ ವಿದ್ವಾಂಸ ಬಾಬಣ್ಣ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ಬೆಳ್ಳಿಪ್ಪಾಡಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here