ಕೈಕಾರ: ಸಂಪೂರ್ಣ ಸುರಕ್ಷಾ ನೋಂದಾವಣಿ ಕಾರ್ಯಕ್ರಮಕ್ಕೆ ಚಾಲನೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು 2023-24 ನೇ ಸಂಪೂರ್ಣ ಸುರಕ್ಷಾ ನೋಂದಾವಣಿ ಕಾರ್ಯಕ್ರಮಕ್ಕೆ ಬೆಟ್ಟಂಪಾಡಿ ವಲಯ ಅಜ್ಜಿಕಲ್ಲು ಕಾರ್ಯಕ್ಷೇತ್ರದ ಕೈಕಾರ ಶಿವಾನಿ ಸಂಘದಲ್ಲಿ ಫೆ.22 ರಂದು ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಸಂಘದ ಹಿರಿಯರಾದ ನೀಲಾವತಿ ತೈ ಕೈಕಾರರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಅಶ್ವಿನಿಯವರು ಸಂಪೂರ್ಣ ಸುರಕ್ಷಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಅಜ್ಜಿಕಲ್ಲು ಒಕ್ಕೂಟದ ಅಧ್ಯಕ್ಷೆ ಸರೋಜ, ಪದಾಧಿಕಾರಿಗಳಾದ ಉಷಾ, ಶಕುಂತಳಾ, ಸಂಘದ ಸದಸ್ಯರು ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ತ್ರಿವೇಣಿ ಪಲ್ಲತ್ತಾರು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here