ನಾಳೆ (ಫೆ.23) ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ಮಹೋತ್ಸವ- ನೂತನ ಸಭಾಭವನ, ಅನ್ನಛತ್ರ ಲೋಕಾರ್ಪಣೆ

0

ಬೆಟ್ಟಂಪಾಡಿ: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ನೂತನ ಸಭಾಭವನ, ಅನ್ನಛತ್ರದ ಲೋಕಾರ್ಪಣಾ ಸಮಾರಂಭ ಫೆ.23 ದೇವಾಲಯದ ಪ್ರತಿಷ್ಠಾ ದಿನದಂದು ನಡೆಯಲಿದೆ.

ಫೆ.23 ಶ್ರೀ ದೇವರ ಪ್ರತಿಷ್ಠೆಯ ದಿನ. 2013 ನೇ ಇಸವಿಯಲ್ಲಿ ದೇವಳದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆದು 10 ವರ್ಷಗಳು ಸಲ್ಲುತ್ತಿವೆ. ಈ ಬಾರಿ 10 ನೇ ವರ್ಷದ ಪ್ರತಿಷ್ಠಾ ಮಹೋತ್ಸವದ ಶುಭ ದಿನವೇ ದಶ ವರುಷದ ಸವಿನೆನಪಿಗೆ ಎಂಬಂತೆ ನೂತನ ಸಭಾಭವನ, ಅನ್ನಛತ್ರ ನಿರ್ಮಾಣ ಕಾರ್ಯ ನಡೆದಿದ್ದು, ಊರ ಪರವೂರ ಭಕ್ತಾದಿಗಳ ದೇಣಿಗೆ ಸಹಾಯದಿಂದ ಭವ್ಯವಾದ ಸಭಾಂಗಣ ನಿರ್ಮಾಣಗೊಂಡಿದೆ.

ಇದೇ ವೇಳೆ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ದ್ವಾದಶ ನಾರಿಕೇಳ ಗಣಪತಿ ಹವನ, ಏಕಾದಶ ರುದ್ರಾಭಿಷೇಕ ಮತ್ತು ಸಾಮೂಹಿಕ ಆಶ್ಲೇಷ ಬಲಿ ಸೇವೆಯು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಉದ್ಘಾಟನಾ ಸಮಾರಂಭ: ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ವಿನಯ್ ಹೆಗ್ಡೆಯವರು ನೂತನ ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರುವರು ಅನ್ನಛತ್ರವನ್ನು ಉದ್ಘಾಟಿಸಲಿದ್ದಾರೆ.

ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಉದ್ಯಮಿ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಂಬೈ ದೀಪಕ್ ಹಾಸ್ಪಿಟಲ್ ನ ಡಾ. ಭಾಸ್ಕರ ಶೆಟ್ಟಿ, ಪದ್ಮಶ್ರೀ ಅಮೈ ಮಹಾಲಿಂಗ ನಾಯ್ಕ್, ಎಸ್.ಕೆ.ಆರ್.ಡಿ.ಪಿ. ಬಿಸಿ ಟ್ರಸ್ಟ್ ಮುಖ್ಯಕಾರ್ಯನಿರ್ವಹಕಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಪ್ರಗತಿಪರ ಕೃಷಿಕ ಮಿತ್ತೂರು ಪುರುಷೋತ್ತಮ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಠಲ ನಾಯಕ್ ಕಲ್ಲಡ್ಕ ಬಳಗದಿಂದ ಗೀತಾ ಸಾಹಿತ್ಯ : ಉದ್ಘಾಟನಾ ಸಮಾರಂಭದ ಬಳಿಕ ಅಪರಾಹ್ನ ಗೀತೆ, ಸಾಹಿತ್ಯದ ಮೂಲಕ ವಿನೂತನ ರೀತಿಯಲ್ಲಿ ಸಮಾಜಕ್ಕೆ ಸಂದೇಶ, ಜಾಗೃತಿ ಮೂಡಿಸುವ ಜನಮನ್ನಣೆಯ ಕಾರ್ಯಕ್ರಮ ವಿಠಲ ನಾಯಕ್ ಮತ್ತು ಬಳಗದವರಿಂದ ’ಗೀತಾ ಸಾಹಿತ್ಯ ಸಂಭ್ರಮ’ ನಡೆಯಲಿದೆ.

LEAVE A REPLY

Please enter your comment!
Please enter your name here