ಪುಣ್ಚಪ್ಪಾಡಿ ಕುದ್ರೋಳಿಮಾಡ ದೈವಸ್ಥಾನದ ಬ್ರಹ್ಮಕಲಶೋತ್ಸವ- ಸನ್ಮಾನ ಸಮಾರಂಭ

0

ಪುಣ್ಚಪ್ಪಾಡಿ: ಪುಣ್ಚಪ್ಪಾಡಿ ಕುದ್ರೋಳಿಮಾಡ ಶ್ರೀ ಧರ್ಮರಸು ಉಳ್ಳಾಕುಲು ಪಿಲಿಭೂತ, ಕುಕ್ಕುಳ ಪಂಜುರ್ಲಿ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ. 22 ರಂದು ಜರಗಿದ ಧಾರ್ಮಿಕ ಸಭಾ ಕಾರ್‍ಯಕ್ರಮದಂದು ದೈವಸ್ಥಾನದ ಸ್ಥಳದಾನಿ ದಯಾನಂದ ನಾಯಕ್ ಬೆಂಗಳೂರು, ಜೀರ್ಣೋದ್ದಾರ ಸಮಿತಿಯ ಕಾರ್‍ಯದರ್ಶಿ ಹರೀಶ್ ತೋಟದಡ್ಕ, ಶ್ರೇಯೋಭಿವೃದ್ಧಿ ಟ್ರಸ್ಟ್‌ನ ಕಾರ್‍ಯದರ್ಶಿ ಗಿರಿಶಂಕರ್ ಸುಲಾಯ ದೇವಸ್ಯ, ಸವಣೂರು ಗ್ರಾ.ಪಂ. ಅಧ್ಯಕ್ಷೆ ರಾಜೀವಿ ವಿ. ಶೆಟ್ಟಿ, ಮರದ ಕೆತ್ತನೆಯ ಶಿಲ್ಪಿ ಮೋಹನ್ ಆಚಾರ್ಯ ಪೆರುವಾಜೆ, ಗುರುಪ್ರಸಾದ್ ಮುಕ್ರಂಪಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು, ವಿವಿಧ ರೀತಿಯಲ್ಲಿ ಸಹಕಾರವನ್ನು ನೀಡಿದ ನಾರಾಯಣ ಮಡಿವಾಳ ಪುಣ್ಚಪ್ಪಾಡಿ, ಮಹೇಶ್ ಕೆ.ಸವಣೂರು, ಸಂಪತ್ ಕುಮಾರ್ ಇಂದ್ರ, ದಿವಾಕರ್ ಬಸ್ತಿ, ದಿನೇಶ್ ಮೆದು, ವಿನಯ್ ಸೂರ್‍ಯ ಆರ್ಥ ಮೂವರ್‍ಸ್, ಗಂಗಾಧರ ದೇವಾಡಿಗ ಪುಣ್ಚಪ್ಪಾಡಿ ಸಹಿತ ಹಲವು ಮಂದಿಯನ್ನು ಸನ್ಮಾನಿಸಿ, ಗೌರವಿಸಲಾಯಿತು.

ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಪುಣ್ಚಪ್ಪಾಡಿ ಕುದ್ರೋಳಿಮಾಡ ದೈವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಎ.ಕೃಷ್ಣ ರೈ ಪುಣ್ಚಪ್ಪಾಡಿ ತಳಮನೆ, ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಪುಣ್ಚಪ್ಪಾಡಿ ಕುದ್ರೋಳಿಮಾಡ ದೈವಸ್ಥಾನದ ಶ್ರೇಯೋಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಜಯರಾಮ ರೈ ತೋಟದಡ್ಕ, ಪುಣ್ಚಪ್ಪಾಡಿ ತಳಮನೆಯ ಯಜಮಾನ ಬಾಲಕೃಷ್ಣ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here