ರಿಕ್ಷಾ ಚಾಲಕ ಯೋಗೀಶ್ ಆಚಾರ್ಯ ನಿಧನ

0

ಪುತ್ತೂರು: ಒಳಮೊಗ್ರು ಗ್ರಾಮದ ಕೊಯಿಲತ್ತಡ್ಕ ನಿವಾಸಿ ರಿಕ್ಷಾ ಚಾಲಕ ಯೋಗೀಶ್ ಆಚಾರ್ಯ(53ವ)ರವರು ಅಲ್ಪಕಾಲದ ಅಸೌಖ್ಯದಿಂದ ಮಾ.1ರಂದು ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಪುತ್ತೂರಿನಲ್ಲಿ ಹಲವು ವರ್ಷಗಳ ಕಾಲ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರಿಗೆ ಕೆಲದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೊಟ್ಟೆನೋವು ಉಲ್ಭಣಗೊಂಡ ಪರಿಣಾಮ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಾ.1 ರಂದು ಸಂಜೆ ನಿಧನರಾಗಿದ್ದಾರೆ.

ಮೃತರು ಪತ್ನಿ ಉಷಾ, ಮಗ ಮಂಗಳೂರಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿರುವ ಕೌಶಿಕ್ ಹಾಗೂ ಪುತ್ರಿ ಕೃತಿಕಾರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here